ಬೆಂಗಳೂರು: ಕೊರೋನಾ ವೈರಸ್ ಕುರಿತಂತೆ ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕಱಣ ದಾಖಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಆಗ್ರಹಿಸಿದ್ದಾರೆ.
ಈ ಕುರಿತು ಕರ್ನಾಟಕ ಡಿಜಿ ಹಾಗೂ ಐಜಿಪಿಗಳಿಗೆ ಪತ್ರ ಬರೆದಿರುವ ಶಿವಕುಮಾರ್ ಅವರು, ದ್ವೇಷ ಪೂರಿತ ಹೇಳಿಕೆ ನೀಡುತ್ತಿರುವ ಇಬ್ಬರು ಬಿಜೆಪಿ ಸಂಸದರು ಹಾಗೂ ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಏಪ್ರಿಲ್ 8 ರಂದು ಹೇಳಿಕೆ ನೀಡಿದ್ದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಕೋರೋನಾ ವೈರಸ್ ಹಿಂದೆ ಜಿಹಾದಿಗಳಿದ್ದಾರೆಂದು ಹೇಳಿದ್ದರು. ಸಂಸದ ಹಾಗೂ ಮಾಜಿ ಸಚಿವ ಅನಂತ್ ಕುಮಾರ್ ಅವರು, ದೆಹಲಿಯಲ್ಲಿ ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದವರನ್ನು ಗುಂಡಿಟ್ಟು ಕೊಲ್ಲಬೇಕೆಂದು ಹೇಳಿದ್ದರು.
Advertisement