ಚಾಮರಾಜನಗರ: ಜೂಜು ಅಡ್ಡೆ ಮೇಲೆ ದಿಢೀರ್ ದಾಳಿ, 25 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಲಾಕ್​ಡೌನ್​ ವೇಳೆ ಜೂಜಾಟಕ್ಕಿಳಿದಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಳ್ಳೇಗಾಲ,(ಚಾಮರಾಜನಗರ): ಲಾಕ್​ಡೌನ್​ ವೇಳೆ ಜೂಜಾಟಕ್ಕಿಳಿದಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇಕ್ಕಡಹಳ್ಳಿ, ತೇರಂಬಳ್ಳಿ, ಮಧುವನ ಹಳ್ಳಿ ಗ್ರಾಮಗಳ ಜಮೀನುಗಳಲ್ಲಿ ಜೂಜಾಟಕ್ಕೆ ಇಳಿಯುತ್ತಿದ್ದ ಗುಂಪಿನ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‌ಇನ್ಸ್​ಪೆಕ್ಟರ್ ವಿ ಸಿ ಅಶೋಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿತು.

ದಾಳಿ ವೇಳೆ, 39,110 ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ 25 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ದೇಶಾದ್ಯಂತ ಲಾಕ್​ಡೌನ್ ಆದೇಶವಿದೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಇವೆಲ್ಲದಕ್ಕೂ ತಲೆ ಕೆಡಿಸಿಕೊಳ್ಳದ ಗುಂಪೊಂದು ಸಾರ್ವಜನಿಕ ಸ್ಥಳಗಳಲ್ಲೇ ಜೂಜಾಟಕ್ಕಿಳಿದಿದ್ದಾರೆ. ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಟಕ್ಕೆ ಇಳಿದಿದ್ದ ಜೂಜುಕೋರರ ಹೆಡೆಮುರಿಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com