ಯಡಿಯೂರಪ್ಪ ನಗರ ಪ್ರದಕ್ಷಿಣೆ: ಲಾಕ್ ಡೌನ್ ಅವಲೋಕನಕ್ಕಾಗಿ ರಸ್ತೆಗಿಳಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಸಂಜೆ ಬೆಂಗಳೂರಿನ  ನಗರದಲ್ಲಿ  ಸಂಚರಿಸಿ ಕೊರೊನಾ ಲಾಕ್‌ ಡೌನ್ ಪರಿಸ್ಥಿತಿಯನ್ನು ಅವಲೋಕಿಸಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಸಂಜೆ ಬೆಂಗಳೂರಿನ  ನಗರದಲ್ಲಿ  ಸಂಚರಿಸಿ ಕೊರೊನಾ ಲಾಕ್‌ ಡೌನ್ ಪರಿಸ್ಥಿತಿಯನ್ನು ಅವಲೋಕಿಸಿದರು.

ನಗರದ  ಗೊರಗುಂಟೆ ಪಾಳ್ಯ, ಸುಮನಹಳ್ಳಿ ಸಿಗ್ನಲ್, ಜಯದೇವ ಜಂಕ್ಷನ್, ದೇವೇಗೌಡ ಪೆಟ್ರೋಲ್ ಬಂಕ್  ಜಂಕ್ಷನ್, ಯಶವಂತಪುರ ಭಾಗಗಳಿಗೆ ಭೇಟಿಕೊಟ್ಟು ಜನರಿಗೆ ಅಚ್ಚರಿ ಮೂಡಿಸಿದರು.

ಯಶವಂತಪುರ ಫ್ಲೈಓವರ್ ಬಳಿ ಪೊಲೀಸರ ಬಳಿ ಮಾತುಕತೆ ನಡೆಸಿ ಪರಿಸ್ಥಿತಿಯ ಜನರ ಸಂಚಾರದ  ಬಗ್ಗೆ ಮಾಹಿತಿ ಪಡೆದರು. ನಗರದ ಹಲವೆಡೆ ಸಂಚರಿಸಿ ಲಾಕ್ ಡೌನ್ ಅನುಷ್ಠಾನವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ಪೊಲೀಸರು, ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕ ಜತೆ ಮಾತುಕತೆ ನಡೆಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com