ಕನ್ನಡದ ಹಿರಿಯ ಸಾಹಿತಿ ಶ್ರೀನಿವಾಸ ಉಡುಪ ನಿಧನ

ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ ಶನಿವಾರ ನಿಧನರಾದರು. 
ಶ್ರೀನಿವಾಸ ಉಡುಪ
ಶ್ರೀನಿವಾಸ ಉಡುಪ

ಬೆಂಗಳೂರು: ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ ಶನಿವಾರ ನಿಧನರಾದರು.

ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ಸಾಹಿತಿ, ನಿವೃತ್ತ ಪ್ರಾದ್ಯಾಪಕರಾಗಿದ್ದ ಶ್ರೀನಿವಾಸ ಉಡುಪ ಶಿವಮೊಗ್ಗದ ತೀರ್ಥಹಳ್ಳಿಯ ಮಲ್ಲೇಶ್ವರದವರು. ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಇಂಗ್ಲೀಷ್ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ಎರಡು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. 

ಕಥೆ, ಕವಿತೆ, ಅಂಕಣ ಬರಹ ಪ್ರಕಟಿಸಿದ್ದ ಶ್ರೀನಿವಾಸ ಉಡುಪರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕಾಂತಾವರ ಕನ್ನಡ ಸಂಘದ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ.

ದೇಶಾದ್ಯಂತ ಲಾಕ್ ಡೌನ್ ಇದ್ದ ಕಾರಣಕ್ಕೆ ಮೃತರ ಅಂತಿಮ ದರ್ಶನಕ್ಕೆ ಅವಕಾಶವಿರಲಿಲ್ಲ. ಶನಿವಾರ ಸಂಜೆ ಬನಶಂಕರಿಯ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ಕುಟುಂಬದವರ ಸಮ್ಮುಖದಲ್ಲಿ ನೆರವೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com