ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ

ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್
ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: :ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಧ್ಯಾಹ್ನ ೧೨ ಗಂಟೆಗೆ ಮಂಡ್ಯ ಕೋವಿಡ್-೧೯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸುವರು.

ಸಭೆಯ ಬಳಿಕ ಸುಮಲತಾ ಅಂಬರೀಶ್ ಅವರು ಸಂಕಷ್ಟದಲ್ಲಿರುವ ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿಸಿ ಕೊವಿಡ್-೧೯ ಸೋಂಕಿನಿAದ ನಿರ್ಬಂಧಿತವಾಗಿರುವ ಪ್ರದೇಶಗಳಿಗೆ ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಛೇರಿ  ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ನಾಗಯ್ಯ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com