ಚಿಕ್ಕಬಳ್ಳಾಪುರ: ಕೊರೋನಾ ಕರ್ತವ್ಯದಲ್ಲಿದ್ದ ಡಾ. ಅನಿಲ್ ಕುಮಾರ್ ನಿಧನ

ಕೊರೋನಾ ವೈರಸ್ ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಅನಿಲ್ ಕುಮಾರ್ ತೀವ್ರ ಹೃದಯಾಘಾದಿಂದ ಗುರುವಾರ ನಿಧನರಾಗಿದ್ದಾರೆ.
ಡಾ. ಅನಿಲ್ ಕುಮಾರ್
ಡಾ. ಅನಿಲ್ ಕುಮಾರ್

ಚಿಕ್ಕಬಳ್ಳಾಪುರ: ಕೊರೋನಾ ವೈರಸ್ ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಅನಿಲ್ ಕುಮಾರ್(52) ತೀವ್ರ ಹೃದಯಾಘಾದಿಂದ ಗುರುವಾರ ನಿಧನರಾಗಿದ್ದಾರೆ.

ಜಿಲ್ಲಾಸ್ಪತ್ರೆಯ ಸರ್ಜನ್ ಆಗಿದ್ದ ಡಾ.ವಿಜಯ ಕುಮಾರ್ ಕೋಲಾರಕ್ಕೆ ವರ್ಗಾವಣೆಗೊಂಡ ಬಳಿಕ ಡಾ.ಅನಿಲ್ ಕುಮಾರ್ ಸುಮಾರು ಎಂಟು ತಿಂಗಳಿಂದ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕೊವಿಡ್-19 ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್-19 ಆಸ್ಪತ್ರೆ ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಕೊವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮ ವಹಿಸಿ ಕಾರ್ಯನಿರ್ವಹಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com