ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗಿಗೆ 14 ದಿನ ಕ್ವಾರಂಟೈನ್‍

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. 

ಜಿಲ್ಲಾಧಿಕಾರಿ ಕಚೇರಿಯ ಈ ಉದ್ಯೋಗಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್‌ನಿಂದ ಇತ್ತೀಚೆಗೆ ಸಾವನ್ನಪ್ಪಿದ ಬಂಟ್ವಾಳ ಮೂಲದ ಮಹಿಳೆಯ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು 14 ದಿನಗಳ ಕ್ವಾರಂಟೈನ್ ಗೆ ಕಳುಹಿಸಲಾಗಿದೆ.

ವರದಿಗಳ ಪ್ರಕಾರ, ಮಹಿಳೆಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಜಿಲ್ಲಾಧಿಕಾರಿ ಉದ್ಯೋಗಿ ಭೇಟಿಯಾಗಿದ್ದಾರೆ. ಅಲ್ಲದೆ, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏಪ್ರಿಲ್ 18 ರಂದು ವಿಚಾರಿಸಿದ್ದರು. ಆದರೆ, ಆಸ್ಪತ್ರೆಯಲ್ಲಿದ್ದಾಗ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯನ್ನು ಉದ್ಯೋಗಿ ಭೇಟಿ ಮಾಡಿರಲಿಲ್ಲ.

ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳ ಕಾಲ ಉದ್ಯೋಗಿಯನ್ನು ಕ್ವಾರಂಟೈನ್ ಕಳುಹಿಸಲು ಜಿಲ್ಲಾಧಿಕಾರಿ ಕಚೇರಿ ನಿರ್ಧರಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಯಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com