ಬಾಗಲಕೋಟೆ: ಸೂಕ್ತ ಚಿಕಿತ್ಸೆ ಸಿಗದೇ ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕು ಕಡಪಟ್ಟಿಯಲ್ಲಿ ನಡೆದಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಅಂಬುಲೆನ್ಸ್ನಲ್ಲಿ ಗರ್ಭಿಣಿ ಮಹಿಳೆಯನ್ನು ಹೊತ್ತುಕೊಂಡು ಜಮಖಂಡಿ ನಗರದಲ್ಲಿ ಅಲೆದಾಟ ನಡೆಸಿದಾಗ ಸೂಕ್ತ ಚಿಕಿತ್ಸೆ ಸಿಗಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಹಿಳೆಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.
ವಿಜಯಪುರಕ್ಕೆ ಹೊರಟ ವೇಳೆ ಮಾರ್ಗ ಮಧ್ಯೆ ಗರ್ಬಿಣಿ ಮಹಿಳೆ ಮೃತಪಟ್ಟಿದ್ದಾರೆ. ಗರ್ಬಿಣಿ ಮಹಿಳೆ ಫಿಡ್ಸ್ನಿಂದ ಬಳಲುತ್ತಿದ್ದಳು ಎನ್ನಲಾಗುತ್ತಿದೆ. ಮೃತ ಮಹಿಳೆಯನ್ನು ರೂಪಾ ಹೊಸಮನಿ(23) ಎಂದು ಗುರುತಿಸಲಾಗಿದೆ.
Advertisement