ಉಡುಪಿ: ಭಟ್ಕಳ ಮೂಲದ ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೋನಾವೈರಸ್ ಸೋಂಕಿನಿಂದ ಬಳಲುತ್ತಿದ್ದ ಉತ್ತರ ಕನ್ನಡ ಭಟ್ಕಳ ಮೂಲದ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಕಆಗಿದ್ದು ಶುಕ್ರವಾರ ಮಣಿಪಾಲದ  ಡಾ ಟಿ ಎಂ ಎ ಪೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಡುಪಿ: ಭಟ್ಕಳ ಮೂಲದ ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಉಡುಪಿ: ಭಟ್ಕಳ ಮೂಲದ ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಕೊರೋನಾವೈರಸ್ ಸೋಂಕಿನಿಂದ ಬಳಲುತ್ತಿದ್ದ ಉತ್ತರ ಕನ್ನಡ ಭಟ್ಕಳ ಮೂಲದ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಕಆಗಿದ್ದು ಶುಕ್ರವಾರ ಮಣಿಪಾಲದ  ಡಾ ಟಿ ಎಂ ಎ ಪೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಗರ್ಭಧಾರಣೆಯ ಐದನೇ ತಿಂಗಳಲ್ಲಿದ್ದ 26 ವರ್ಷದ ಮಹಿಳೆಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ "ಕೊರೋನಾ ಪಾಸಿಟಿವ್ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಈ ದಿನ ಜಿಲ್ಲೆಯ ಪಾಲಿಗೆ ಉತ್ತಮ ದಿನವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿತ್ತು. ಮಗುವನ್ನು ಉಳಿಸುವುದು ವೈದ್ಯರಿಗೆ ಸವಾಲಾಗಿತ್ತು. ಇದೇ ಕಾರಣಕ್ಕೆ ಬೇರೆಲ್ಲಾ ಆಸ್ಪತ್ರೆಗಳಲ್ಲಿ ಆಕೆಗೆ ಚಿಕಿತ್ಸೆ ನೀಡಲು ನಿರಾಕರಿಸಲಾಗಿತ್ತು.

"ಆರಂಭಿಕ ದಿನಗಳಲ್ಲಿ, ಜಿಲ್ಲಾ ಆಡಳಿತ ಮತ್ತು ಟಿಎಂಎ ಪೈ ಆಸ್ಪತ್ರೆ ಒಪ್ಪಂದ ಮಾಡಿಕೊಂಡಿದ್ದು  ಉಡುಪಿ ಜಿಲ್ಲೆಯ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೆವು. ಆ ಹಿನ್ನೆಲೆಯಲ್ಲಿ ಮೊದಲು ಹೊರ ಜಿಲ್ಲೆಯ ಗರ್ಭಿಣಿಯನ್ನು ಸೇರಿಸಿಕೊಳ್ಳುವುದಕ್ಕೆ ನಾವು ಸಹ ಒಪ್ಪಿರಲಿಲ್ಲ. ಆ ನಂತರ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯ ನಿರ್ದೇಶನವನ್ನು ಅನುಸರಿಸಿ, ನಾವು ಈ ಪ್ರಕರಣವನ್ನು ಸ್ವೀಕರಿಸಿದ್ದೆವು" ಎಂದರು.

ಸೋಂಕಿನಿಂದ ಮುಕ್ತವಾದ ಗರ್ಭಿಣಿ ಮಹಿಳೆಗೆ ಮಲ್ಲಿಗೆ ಹೂವು, ಹಣ್ಣು ಮತ್ತು ಸಿಹಿ ತಿನಿಸುಗಳನ್ನು ನೀಡಿ ಬೀಳ್ಕೊಡಾಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com