ಮಂಗಳೂರು: ಕೊರೋನಾ ವೈರಸ್ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಕೋವಿಡ್ -19 ರೋಗಿಗಳ ಮೃತದೇಹಗಳ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರವು ಸೂಚಿಸಿರುವ ಶಿಷ್ಟಾಚಾರಗಳನ್ನು ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊವಿಡ್-19ನಿಂದ ಸಾವನ್ನಪ್ಪಿದವರನ್ನು ಅವರವರ ಧಾರ್ಮಿಕ ಪದ್ಧತಿಗಳಂತೆ ಸಮಾಧಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಂತಿಮ ವಿಧಿ-ವಿಧಾನಗಳನ್ನು ನಡೆಸಲು 20 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡಲಾಗುವುದಿಲ್ಲ. ಮೃತ ವ್ಯಕ್ತಿಯ ಹತ್ತಿರದ ಸಂಬಂಧಿಗಳಿಗೆ ಸಹ ದೇಹವನ್ನು ಸ್ಪರ್ಶಿಸಲು ಇಲ್ಲವೇ ಮೃತದೇಹದ ಸ್ನಾನಕ್ಕೆ ಅನುಮತಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Advertisement