ಮಾಜಿ ಸಚಿವ ಎಚ್.ಕೆ. ಪಾಟೀಲ್ ದೂರು: ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣ ದಾಖಲು

ಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ.
ಎಚ್ ಕೆ ಪಾಟೀಲ್
ಎಚ್ ಕೆ ಪಾಟೀಲ್

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ,ಉಪಕರಣ ಖರೀದಿಯ ಲ್ಲಿ ಭ್ರಷ್ಟಾಚಾರ ಹಾಗೂ ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂದು ಆರೋಪಿಸಿ ಮಾಜಿ ಸಚಿವ ಎಚ್.ಕೆ.ಪಾಟೀಲ್
ನೀಡಿದ ದೂರನ್ನು ಮಾನವ ಹಕ್ಕುಗಳ ಆಯೋಗ ವಿಚಾರಣೆ ಕೈಗೆತ್ತಿಕೊಂಡಿದೆ.

ಈ ಸಂಬಂದ ಪ್ರಕರಣ ದಾಖಲಿಸಿರುವ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರಾದ ಡಿ.ಎಚ್.ವಘೇಲಾ ವಿಚಾರಣೆ ಗೆ ಹಾಜರಾಗಿ ಮಾಹಿತ ಹಾಗೂ ದಾಖಲೆಗಳನ್ನುಸಲ್ಲಿಸುವಂತೆ ಎಚ್.ಕೆ.ಪಾಟೀಲರಿಗೆ ಕೋರಿದ್ದಾರೆ.ಜುಲೈ 27ರಂ ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಆದರೆ ಅಂದು ವಿಚಾರಣೆಗೆ ಗೈರಾದ ಹಿನ್ನಲೆಯಲ್ಲಿ ಆಗಸ್ಟ್ 3 ಅಥವಾ 4 ರಂದು ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಎಚ್.ಕೆ.ಪಾಟೀಲರಿಗೆ ಬರೆದಿರುವ ಪತ್ರದ ಮಾಹಿತಿ ಹೀಗಿದೆ. 

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ದಿನಾಂಕ 10.7.2020 ರಂದು ಗದಗ ಶಾಸಕ ಎಚ್.ಕೆ. ಪಾಟೀಲ ಅವರು ನೀಡಿದ ದೂರಿನನ್ವಯ ಹೆಚ್.ಆರ್.ಸಿ ನಂ:2158/10/27/2020(SB-1) ಅಡಿಯಲ್ಲಿ ಕರ್ನಾಟಕ ಸರ್ಕಾರದ ವಿರುದ್ದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಪ್ರಾರಂಭಿಸಿದೆ. 

ಈ ಕುರಿತು ದಿನಾಂಕ 27.7.2020 ರಂದು ಎಚ್.ಕೆ. ಪಾಟೀಲರಿಗೆ ಪತ್ರ ಬರೆದಿರುವ ರಾಜ್ಯ ಮಾನವ ಹಕ್ಕುಗಳ ಆಯೋಗದ ಹೆಚ್ಚುವರಿ ನಿಬಂಧಕರು ದಿನಾಂಕ 28.7.2020 ರಂದು ಮಾನ್ಯ ಶಾಸಕರಿಗೆ ಆಯೋಗದ ಮುಂದೆ ಹಾಜರಾಗಲು ತಿಳಿಸಿದ್ದರು. ಆದರೆ ಕಾರಣಾಂತರಗಳಿಂದ ಶಾಸಕರು ಬೆಂಗಳೂರಿನಲ್ಲಿ ಇಲ್ಲದೇ ಇದ್ದಿದ್ದರಿಂದ ಅಂದು ದೂರುದಾರರು
ಮಾಹಿತಿ ಒದಗಿಸಲು ಹಾಜರಾಗಲು ಸಾಧ್ಯವಾಗಲಿಲ್ಲ. ಈ ದಿನಾಂಕವನ್ನು ಬದಲಿಸಿ ಆಗಸ್ಟ್-3 ಅಥವಾ ಆಗಸ್ಟ್-4 ರಂದು ಹಾಜರಾಗಲು ಮತ್ತೊಂದು ಸಮಯ ನಿಗದಿಪಡಿಸುವುದಾಗಿ ದೂರವಾಣಿ ಮೂಲಕ ತಿಳಿಸಿರುತ್ತಾರೆ.

ದಿನಾಂಕ 10.7.2020ರಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ “ಗೌರವಯುತ ಶವ ಸಂಸ್ಕಾರ, ಅಗತ್ಯ ಸಂದರ್ಭದಲ್ಲಿ ಆಂಬುಲೆನ್ಸ್ ವ್ಯವಸ್ಥೆ, ಸಕಾಲಕ್ಕೆ ಆಸ್ಪತ್ರೆಗೆ ರೋಗಿಯನ್ನು ಕರೆದು ಕೊಂಡು ಹೋಗುವ ಅನುಕೂಲತೆ ಮತ್ತು ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಹಾಗೂ ಗುಣಮಟ್ಟದ ಸೇವೆ ನಮ್ಮ ಮಾನವ ಹಕ್ಕುಗಳಲ್ಲವೇ? ಈ ಮಾನವ ಹಕ್ಕುಗಳನ್ನು ರಕ್ಷಿಸುವ ಪ್ರಜಾಸತ್ತಾತ್ಮ ಕರ್ತವ್ಯ ಹೊಂದಿರುವ ಸರ್ಕಾರವೇ ಇವುಗಳ ಉಲ್ಲಂಘನೆಯ ಬಗ್ಗೆ ಸುಮ್ಮನೆ ಕುಳಿತಿರುವುದು ಜನವಿರೋಧಿ ಕ್ರಮವಾಗುತ್ತದೆ ಎಂದು ಮತ್ತು ಕಳೆದ ಕೆಲ ತಿಂಗಳಿಂದ ಕೊರೋನಾ ಮಾರಿಯಿಂದಾಗಿ ಕರ್ನಾಟಕದ ಜನ ವಿಲ ವಿಲ ಒದ್ದಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 2000 ಕ್ಕೂ ಹೆಚ್ಚು ಸೋಂಕಿತರಾಗುತ್ತಿದ್ದಾರೆ. 40-50 ಜನ ಸಾವಿಗೀಡಾಗುತ್ತಿದ್ದಾರೆ.

ಸರ್ಕಾರದ ನಿಷ್ಕ್ರಿಯವಾದ ಕೆಲಸ, ಸ್ಪಷ್ಟ ನಿಲುವುಗಳ ಕೊರತೆ,ಪ್ರಾಮಾಣಿಕ ಪ್ರಯತ್ನದ ಕೊರತೆ, ಸರಕಾರದಲ್ಲಿ
ಇಲ್ಲದಿರುವ ಸಮನ್ವ ಯತೆಗಳಿಂದಾಗಿ ಅದರ ಜೊತೆಜೊತೆ ಎಲ್ಲಿ ನೋಡಿದಲ್ಲಿ ಭ್ರಷ್ಠಾಚಾರದ ವಾಸನೆಗಳಿಂದಾಗಿ ಜನರಿಗೆ ಆಸ್ಪತ್ರೆಯಲ್ಲಾಗಲಿ, ಕೋವಿಡ್ ಕೇಂದ್ರಗಳಲ್ಲಾಗಲಿ ಅಥವಾ ಆಂಬುಲೆನ್ಸ್ ಸೇವೆಯಲ್ಲಾಗಲಿ ಸಮರ್ಪಕ ಸೇವೆ ಇಲ್ಲದಾಗಿದೆ.

ಆಂಬುಲೆನ್ಸ್ ಸೇವೆ ಲೋಪದಿಂದಾಗಿ ಸೋಂಕಿತರಿಗೆ 2-3 ದಿನ ಆಂಬುಲೆನ್ಸ್ ಸಿಗದೇ ಪ್ರಾಣ ಕಳೆದುಕೊಂಡ ಕೆಲ ಘಟನೆ ಮಾಧ್ಯಮಗಳ ಮೂಲಕ ತಮ್ಮ ಗಮನಕ್ಕೆ ಬಂದಿರಲು ಸಾಕು. ಕೆಲ ಘಟನೆಗಳ ಪತ್ರಿಕಾ ವರದಿ ಲಗತ್ತಿಸ ಲಾಗಿದೆ ಹಾಗೂ ಈ ಪತ್ರದ ಜೊತೆ Pendrive ಅನ್ನು ಕಳಿಸಿರುವೆ. ಆಸ್ಪತ್ರೆಯಲ್ಲಿ ಹಾಸಿಗೆ ಇಲ್ಲದ ಕಾರಣ ಪ್ರವೇಶ ನೀಡದೇ ಇರುವ ಘಟನೆ ಹಲವು.ಕೆಲವರು ಪ್ರವೇಶ ಸಿಗದೇ ಪ್ರಾಣ ಕಳೆದುಕೊಂಡಿದ್ದಾರೆ.ವರದಿ ಹಾಗೂ ಅದರ ಚಿತ್ರಗಳನ್ನು ಕಳಿಸಿರುವೆ. ವೈದ್ಯರಿಗೆ,ಆರೋಗ್ಯ ಕಾರ್ಯಕ ರ್ತರಿಗೆ ರಕ್ಷಣೆಗಾಗಿ ಗುಣಮಟ್ಟದ ಪಿಪಿಇ (Personal Protection Equipment) ಕಿಟ್ ಪೂರೈಸದೇ ನಿರ್ಲಕ್ಷದಿಂದಾಗಿ ಅವರ ಜೀವಗಂಡಾಂತರಕ್ಕೆ ದೂಡುವಂತೆ ಮಾಡಲಾಗಿದೆ. ಗುಣಮಟ್ಟದ ಕೊರತೆ ಬಗ್ಗೆ ಸರ್ಕಾರವೇ ಬರೆದ ಪತ್ರ ಲಗತ್ತಿಸಲಾಗಿದೆ” ಎಂದು ತಿಳಿಸಿದ್ದರು.

ಬಳ್ಳಾರಿ,ರಾಯಚೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಲ್ಲಿ, ಬಳ್ಳಾರಿ ಇರಲಿ ಬೆಂಗಳೂರಲ್ಲಾಗಲಿ ಭಾವನೆಗಳಿಗೆ ಘಾಸಿಯಾಗುವ ರೀತಿಯಲ್ಲಿ ಶವಗಳ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂಬ ಚಿತ್ರ ಹಾಗೂ ವರದಿ ಗಳು ಹೃದಯ ವಿದ್ರಾವಕ ಘಟನೆಗಳಾಗಿವೆ” ಎಂದು ಕಳವಳ ವ್ಯಕ್ತಪಡಿಸಿದ್ದರು. 

“ಆಯೋಗವು ಆಹ್ವಾನಿಸಿದರೆ, ಚರ್ಚೆ ಬಯಸಿದರೆ ಇನ್ನೂ ಹೆಚ್ಚಿನ ವಿವರ ಲಭ್ಯಗೊಳಿಸುವೆ.ಜನ ಕಲ್ಯಾಣ ಎಲ್ಲ ಸಂಸ್ಥೆಗಳ ಉದ್ದೇಶ, ಗಾಬರಿಗೊಳಿಸುವ ಇಂಥ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದಿಂದ ಆಯೋಗ ತನ್ನ ಉಳಿದೆಲ್ಲ ಕೆಲಸ ಬದಿಗೊತ್ತಿ ಕೊರೋನಾ ಸಂದರ್ಭದಲ್ಲಿ ವಿಶಿಷ್ಟ ಕರ್ತವ್ಯ ನಿರ್ವಹಣೆಗೆ ಮುಂದಾಗಲಿ ಎಂದು ಕೋರಿದ್ದರು. ದಿನಾಂಕ 27.7.2020 ರಂದು ಸಭೆ ಸೇರಿದ ಮಾನವ ಹಕ್ಕುಗಳ ಆಯೋಗದ ಪೂರ್ಣಪೀಠ ಈ ಕುರಿತು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಪ್ರಾರಂಭಿಸಿದೆ.ಆಗಸ್ಟ್-3 ಅಥವಾ ಆಗಸ್ಟ್-4 ರಂದು ಆಯೋಗ ಬಯಸಿದರೆ ಮಾನ್ಯ ಶಾಸಕರು ಹಾಜರಾಗಿ ಈಗಾಗಲೇ ನೀಡಲಾಗಿರುವ ದಾಖಲೆಗಳು ಮತ್ತು ಪೆನ್‍ಡ್ರೈವ್ ಜೊತೆಗೆ ಮತ್ತಷ್ಟು ವಿವರಗಳನ್ನು ಹಂಚಿಕೊಳ್ಳುವರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com