ಭಾನುವಾರದ ಲಾಕ್‌ಡೌನ್ ತೆರವು: ವಾಹನ, ಜನ ಸಂಚಾರ ಯಥಾಸ್ಥಿತಿ

ಅನ್‌ಲೌಕ್‌-3 ಮಾರ್ಗಸೂಚಿ ನಿನ್ನೆಯಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಲ್ಲಿ ಸೂಚಿಸಿದ್ದಂತೆ ಭಾನುವಾರದ ಲಾಕ್‌ಡೌನ್‌ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಇಂದು ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅನ್‌ಲೌಕ್‌-3 ಮಾರ್ಗಸೂಚಿ ನಿನ್ನೆಯಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಲ್ಲಿ ಸೂಚಿಸಿದ್ದಂತೆ ಭಾನುವಾರದ ಲಾಕ್‌ಡೌನ್‌ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಇಂದು ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. 

ಕಳೆದ ಎರಡು ತಿಂಗಳುಗಳ ಭಾನುವಾರಗಳಂದು ಲಾಕ್‌ಡೌನ್ ಇದ್ದುದರಿಂದ ಜನರು ಮನೆಯಿಂದ ಹೊರಗಡೆ ಬಂದಿರಲಿಲ್ಲ. ಆದರೆ ಈ ಭಾನುವಾರ ಎಲ್ಲಾ ಚಟುವಟಿಕೆಗಳು ಆರಂಭಗೊಂಡಿವೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಹೊರಗೆ ಆಟೋ ಹಾಗೂ ಕ್ಯಾಬ್‌ ಸಂಚಾರ ಎಂದಿನಂತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಭಾನುವಾರ ರಜಾ ದಿನವಾಗಿರುವುದರಿಂದ ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳು ಬಂದ್ ಆಗಿರುವುದರಿಂದ ಜನಸಂಚಾರವೂ ವಿರಳವಾಗಿದೆ. ಆದರೆ ದ್ವಿಚಕ್ರ ವಾಹನ ಸವಾರರು ಮಾತ್ರ ಯಾವುದೇ ಆತಂಕ ಇಲ್ಲದೆ ಎಂದಿನಂತೆ ಸಂಚರಿಸುತ್ತಿರುವುದು ಕಂಡುಬಂತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com