ಬೆಂಗಳೂರು: ಹಲವು ಪೊಲೀಸರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಇದೀಗ ಪ್ಲಾಸ್ಮಾ ದಾನ ಮುಂದೆ ಬಂದಿದ್ದಾರೆ.
ಅವರು ಇದೀಗ ಸಮಾಜಕ್ಕೆ ನಿರೀಕ್ಷಿಸಿದಕ್ಕಿಂತ ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ. ಅವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ ಎಂದು
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.
ಕೆಎಸ್ಆರ್ಪಿ ಪೊಲೀಸ್ ಕಾನ್ಸ್ ಸ್ಟೇಬಲ್ ವೀರಭದ್ರಯ್ಯ, ಕೋವಿಡ್-19 ಸೋಂಕಿನಿಂದ ಗುಣಮುಖರಾದ ಬಳಿಕ ನಗರದ ಎಚ್ಸಿಜಿ ಆಸ್ಪತ್ರೆಯಲ್ಲಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ. ಅವರು ಈ ಮೂಲಕ ನಮ್ಮ ಇಡೀ ಇಲಾಖೆ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಇನ್ನಷ್ಟು ಜನರು ಮುಂದೆ ಬರಲು ಅವರು ಪ್ರೇರಣೆಯಾಗಿದ್ದಾರೆ ಎಂದು ಡಿಐಜಿ ಸೂದ್ ಶ್ಲಾಘಿಸಿದ್ದಾರೆ.
Advertisement