ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕ್ವಾರಂಟೈನ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ. 
ಕಮಲ್ ಪಂತ್
ಕಮಲ್ ಪಂತ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ. 

ಶನಿವಾರವಷ್ಟೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕಮಲ್ ಪಂತ್ ಅವರು ಭಾನುವಾರದಿಂದಲೇ ಕ್ವಾರಂಟೈನ್'ಗೊಳಗಾಗಿದ್ದಾರೆ. 

ಆಯುಕ್ತರಾಗುವ ಮುನ್ನ ಕಮಲ್ ಪಂತ್ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಪ್ರತಿದಿನ ಬೆಳಿಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾತಿ ನೀಡುವುದು ನಿಯಮ. ಅದರಂತೆ ನಿತ್ಯ ಕಮಲ್ ಪಂತ್ ಅವರು ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು. 

ಪೊಲೀಸರ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು. ಕಳೆದ 3 ದಿನಗಳಿಂದ ರಾಜ್ಯ ಗುಪ್ತದಳದ ಎಡಿಜಿಪಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಬಿ.ದಯಾನಂದ್ ಅವರೂ ಕೂಡ ಇದೀಗ ಕ್ವಾರಂಟೈನ್'ಗೊಳಗಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com