ಬೆಂಗಳೂರು: ಅಕ್ರಮ ಚಟುವಟಿಕೆಗಳು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ 70ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಪೊಲೀಸರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಎಸ್ ಪಿ ಸೂಚನೆ ಮೇರೆಗೆ ಮಾದನಾಯಕನಹಳ್ಳಿ ಠಾಣೆ ಸಿಪಿಐ ಸತ್ಯನಾರಾಯಣ್ ಹಾಗೂ ನೆಲಮಂಗಲ ಸಿಪಿಐ ಶಿವಣ್ಣ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ಕೈಗೊಂಡಿದ್ದರು.
ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.
ಕುಖ್ಯಾತ ರೌಡಿಶೀಟರ್ಗಳಾದ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, ಪಾಯ್ಸನ್ ರಾಮ, ಖಾಸಿಮ್ , ಶರವಣ ಮನೆಗಳ ಮೇಲೆ ದಾಳಿನಡೆದಿದ್ದು ಇದಲ್ಲದೆ ನಾಗರಾಜ್ ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ್ ಸೇರಿ 70ಕ್ಕೂ ಹೆಚ್ಚು ಇತರೆ ರೌಡಿಶೀಟರ್ಗಳ ಮನೆಗಳ ಮೇಲೆ ಖಾಕಿ ದಾಳಿ ನಡೆಸಿದೆ. ರೌಡಿಶೀಟರ್ಗಳ ಮನೆಗಳಿಂದ ಮಾರಕಾಸ್ತ್ರಗಳನ್ನ ಸಹ ಜಪ್ತಿ ಮಾಡಲಾಗಿದೆ. ರೌಡಿಗಳ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
Advertisement