ಇಎಸ್ಐ ಆಸ್ಪತ್ರೆಯಲ್ಲಿ ಮರಣ ಪ್ರಮಾಣ ಹೆಚ್ಚಳ; ಪರಿಶೀಲಿಸಲು ಸಮಿತಿ ರಚನೆ: ಸಚಿವ ಡಾ. ಕೆ.ಸುಧಾಕರ್

ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಮರಣ ಪ್ರಮಾಣ ಹೆಚ್ಚಳವಾಗಿದ್ದು,ಇದಕ್ಕೆ ಕಾರಣ ತಿಳಿಯಲು ಸಮಿತಿ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸೂಚನೆ ನೀಡಿದ್ದಾರೆ.
ಕೆ ಸುಧಾಕರ್
ಕೆ ಸುಧಾಕರ್

ಬೆಂಗಳೂರು: ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಮರಣ ಪ್ರಮಾಣ ಹೆಚ್ಚಳವಾಗಿದ್ದು,ಇದಕ್ಕೆ ಕಾರಣ ತಿಳಿಯಲು ಸಮಿತಿ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸೂಚನೆ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಕೋವಿಡ್ ಮೃತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಇಎಸ್ಐಗೆ ಭೇಟಿ ನೀಡಿ ಕೊರೊನಾ ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸೆ,ಇತರೆ ಸೌಲಭ್ಯಗಳನ್ನು ಪರಿಶೀಲಿಸಿದ ರು. ಆಸ್ಪತ್ರೆಯಲ್ಲಿ ಈವರೆಗೆ 421 ಕೊರೊನಾ ರೋಗಿಗಳು ದಾಖಲಾಗಿದ್ದಾರೆ. ಈವರೆಗೆ 54 ಕೊರೊನಾ ರೋಗಿಗಳು ಮೃತಪಟ್ಟಿದ್ದು, ಮರಣ ಪ್ರಮಾಣ ಶೇ.12.8 ರಷ್ಟಿದೆ ಎಂದು ವೈದ್ಯಾಧಿಕಾರಿಗಳು ಸಚಿವರಿಗೆ ವಿವರಿಸಿದರು. ಈ ರೀತಿ ಮರಣ ಹೆಚ್ಚಳವಾಗಲು ಕಾರಣ ಪತ್ತೆ ಮಾಡಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚಿಸಬೇಕು ಎಂದು ಸಚಿವ ಡಾ. ಕೆ.ಸುಧಾಕರ್ ಸೂಚಿಸಿದರು.

ಕ್ಯಾನ್ಸರ್ ಇರುವ ರೋಗಿಗಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ಇನ್ನೂ ಹಲವು ರೋಗಿಗಳು ತಡ ವಾಗಿ ಬಂದು ದಾಖಲಾಗಿದ್ದಾರೆ.ಹೀಗಾಗಿ ಮರಣ ಪ್ರಮಾಣ ಹೆಚ್ಚಿದೆ. ಮರಣಕ್ಕೆ ಸಂಬಂಧಿಸಿದಂತೆ ಆಡಿಟ್ ವರದಿ ರೂಪಿಸಲು ಆದೇಶಿಸಲಾಗಿದೆ.ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ವೈದ್ಯಾಧಿ ಕಾರಿಗಳು ಹೇಳಿದರು.

ಇದೇ ವೇಳೆ ಸಚಿವ ಡಾ. ಕೆ.ಸುಧಾಕರ್ ಅವರು ವೀಡಿಯೋ ಕಾಲ್ ಮೂಲಕ ರೋಗಿಗಳೊಂದಿಗೆ ಸಂವಾದ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, “ಇಎಸ್ ಐ ಆಸ್ಪತ್ರೆ ಯಲ್ಲಿ 494 ಹಾಸಿಗೆಗಳಿದ್ದು, ಸುಮಾರು 150 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡ ಲಾಗಿದೆ. ಇಬ್ಬರು ರೋಗಿಗಳ ಸ್ಥಿತಿ ಗಂಭೀರವಾಗಿದೆ. 10 ರೋಗಿಗಳು ಐಸಿಯುನಲ್ಲಿದ್ದು,ಈಗ ಚೇತರಿ ಸಿಕೊಂಡಿದ್ದಾರೆ. ಈ ಆಸ್ಪತ್ರೆಯಲ್ಲಿ ಮನೆಯ ಆರೈಕೆ ದೊರೆಯುತ್ತಿದೆ ಎಂದು ಅವರು ಶ್ಲಾಘಿಸಿದ್ದಾರೆ. ಪಿಜಿ ವಿದ್ಯಾರ್ಥಿಗಳು ಮತ್ತು ವೈದ್ಯರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ರೀತಿ ಮತ್ತಷ್ಟು ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳಲ್ಲಿ ವಿಶ್ವಾಸ ಮೂಡಿಸಬೇಕಿದೆ ಎಂದು ಅವರು ಸೂಚಿಸಿದರು.

ಕೊರೊನಾ ಸೋಂಕಿತರಾಗಿದ್ದ 42 ಗರ್ಭಿಣಿಯರಿಗೆ ಇಎಸ್ ಐ ನಲ್ಲಿ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಆಸ್ಪತ್ರೆಯಲ್ಲಿ ಆರ್ ಟಿಪಿಸಿಆರ್ ಲ್ಯಾಬ್ ನಿರ್ಮಿಸಿದ್ದು, ಮುಂದಿನ ವಾರದಿಂದ ಕಾರ್ಯಾರಂಭಿಸಲಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಕೋವಿಡ್ ಆರೈಕೆ ಕೇಂದ್ರಗಳಲ್ಲಿ 1,500 ಹಾಸಿಗೆಗಳು ಖಾಲಿ ಇವೆ. ಹಾಸಿಗೆ ಸಾಕಷ್ಟು ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಲಾಗಿದೆ. ಕೋವಿಡ್ ಪಿಡುಗು ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ನಿಲುವುಗಳನ್ನು ದೇಶದ ಶೇ.91 ರಷ್ಟು ಜನರು ಒಪ್ಪಿದ್ದಾರೆ ಎಂದು ಸಮೀಕ್ಷೆಯೊಂದರಲ್ಲಿ ತಿಳಿದುಬಂದಿದೆ. ಇದು ತಪ್ಪು ಎಂದಾದಲ್ಲಿ,ಅಷ್ಟೂ ಜನರ ಭಾವನೆಗಳಿಗೆ ವಿರುದ್ಧವಾಗಿ ಹೇಳಿದಂತಾಗುತ್ತದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com