ಕರುನಾಡಿಗೆ ಕೊರೋನಾಘಾತ: ಇಂದು 107 ಬಲಿ, 5,985 ಹೊಸ ಪ್ರಕರಣ ಪತ್ತೆ, 1.78 ಲಕ್ಷ ಸೋಂಕು!

ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು 5,985 ಪ್ರಕರಣಗಳು ಪತ್ತೆಯಾಗಿದ್ದು 107 ಮಂದಿ ಬಲಿಯಾಗಿದ್ದಾರೆ. 
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು 5,985 ಪ್ರಕರಣಗಳು ಪತ್ತೆಯಾಗಿದ್ದು 107 ಮಂದಿ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,985 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,78,087ಕ್ಕೆ ಏರಿಕೆಯಾಗಿದೆ. ಇದೇ ವೇಳೆ 4,670 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 107 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,198ಕ್ಕೆ ಏರಿಕೆಯಾಗಿದೆ.

ಒಟ್ಟಾರೆ 1,78,087 ಕೊರೋನಾ ಪ್ರಕರಣಗಳ ಪೈಕಿ 93,908 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 80,973 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇನ್ನು ರಾಜ್ಯಾದ್ಯಂತ ಸುಮಾರು 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 1,948 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇನ್ನು 22 ಮಂದಿ ಇಂದು ಮೃತಪಟ್ಟಿದ್ದು ಒಟ್ಟಾರೆ 1,240 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಒಟ್ಟಾರೆ 74,185 ಸೋಂಕಿತರ ಪೈಕಿ 39,129 ಮಂದಿ ಗುಣಮುಖರಾಗಿದ್ದಾರೆ. ಇನ್ನು 33,815 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com