ಬಿಎಸ್ಎನ್ಎಲ್ ಕುರಿತು ಅನಂತ್ ಕುಮಾರ್ ಹೆಗ್ಡೆ ವಿವಾದಾಸ್ಪದ ಹೇಳಿಕೆ!

ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಅನಂತ್ ಕುಮಾರ್ ಹೆಗ್ಡೆ
ಅನಂತ್ ಕುಮಾರ್ ಹೆಗ್ಡೆ

ಕುಮುಟಾ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕುಮಟಾದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ಆ ಸಂಸ್ಥೆಯನ್ನು ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. 

ಸಮರ್ಪಕ ಸೇವೆ ನೀಡುವುದು ಬಿಎಸ್‍ಎನ್‍ಎಲ್ ನೌಕರರಿಂದ ಸಾಧ್ಯವಿಲ್ಲ. ಈಗಾಗಲೇ 85 ಸಾವಿರ ನೌಕರರನ್ನು ಮನೆಗೆ ಕಳುಹಿಸಿದ್ದೇವೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸಿ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com