ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ ನಿರ್ಮಾಣ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.
ಸಚಿವ ಅಶೋಕ್
ಸಚಿವ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

ಕರ್ನಾಟಕ ಸೇರಿದಂತೆ ಪ್ರವಾಹ ಪೀಡಿತ ರಾಜ್ಯಗಳ ಜೊತೆ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು, 

ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ಅವರು, ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ. ಭವನದಲ್ಲಿ ಆಸ್ಪತ್ರೆ, ಗ್ರಂಥಾಲಯ, ವಾಸ್ತವ್ಯ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಿರಲಿದೆ. ಇದಕ್ಕಾಗಿ ರೂ.200 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. 

ಪ್ರವಾಹ ಸಂತ್ರಸ್ತರು ಆರೋಗ್ಯದ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರ್ಯಾಪಿಡ್ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. 

ನೆರೆ ಸಂತ್ರಸ್ತರಿಗೆ ಪೌಷ್ಟಿಕ ಆಹಾರ
ಪ್ರವಾಹ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಪೌಷ್ಠಿಕಾಂಶ ಆಹಾರ ನೀಡಲು ನಿರ್ಧರಿಸಲಾಗಿದ್ದು, ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೆ ಮೊಟ್ಟೆ, ಉಪ್ಪಿನಕಾಯಿ, ಪಲ್ಯ, ಮೊಸಲು ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಪ್ರವಾಸ ಸಂತ್ರಸ್ತರಿಗೆ ಕೇವಲ ಅನ್ನ ಸಂಬಾರು ಮಾತ್ರ ನೀಡಲಾಗುತ್ತಿತ್ತು. ನೊಂದು ಬಂದಿರುವ ಜನರಿಗೆ ಕೇವಲ ಅನ್ನ ಸಂಬಾರು ನೀಡುವುದು ಸರಿಯಲ್ಲ. ನೊಂದವರಿಗೆ ಪೌಷ್ಟಿಕಾಂಶದ ಆಹಾರ ನೀಡುವುದು ಮುಖ್ಯ ಎಂಬುದನ್ನು ಅರಿತು ಇನ್ನು ಮುಂದೆ ಮಧ್ಯಾಹ್ನ ಹಾಗೂ ರಾತ್ರಿ ಊಟದ ವೇಳೆ ಮೊಟ್ಟೆ, ಉಪ್ಪಿನಕಾಯಿ, ಪಲ್ಯ, ಮೊಸಲು ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. 

2019ರ ಪ್ರವಾಹ ಪರಿಸ್ಥಿತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 2019ರಲ್ಲಿ ಮಳೆಯಿಂದಾಗಿ ಮನೆ ಬಿದ್ದವರಿಗೆ ಹಣ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಆದರೆ, ಸರ್ಕಾರವು 21 ಜಿಲ್ಲೆಗಳಿಗೆ ರೂ.334.29 ಕೋಟಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾವಾರು ಮಾಹಿತಿ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com