ಮಂಗಳೂರು : ಹಳೆ ರೌಡಿ ಎಕ್ಕೂರು ಬಾಬಾ ಕೊರೊನಾಗೆ ಬಲಿ

ಒಂದು ಕಾಲದಲ್ಲಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಜಿಲ್ಲೆಯ ಕುಖ್ಯಾತ ಮಾಜಿ ರೌಡಿ ಎಕ್ಕೂರು ನಿವಾಸಿ ಎಕ್ಕೂರು ಬಾಬಾ ಅಲಿಯಾಸ್ ಶುಭಕರ ಶೆಟ್ಟಿಯನ್ನು ಕೊರೋನಾ ಬಲಿ ತೆಗೆದುಕೊಂಡಿದೆ.
ಎಕ್ಕೂರು ಬಾಬಾ
ಎಕ್ಕೂರು ಬಾಬಾ

ಮಂಗಳೂರು: ಒಂದು ಕಾಲದಲ್ಲಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಜಿಲ್ಲೆಯ ಕುಖ್ಯಾತ ಮಾಜಿ ರೌಡಿ ಎಕ್ಕೂರು ನಿವಾಸಿ ಎಕ್ಕೂರು ಬಾಬಾ ಅಲಿಯಾಸ್ ಶುಭಕರ ಶೆಟ್ಟಿಯನ್ನು ಕೊರೋನಾ ಬಲಿ ತೆಗೆದುಕೊಂಡಿದೆ.

ಎಕ್ಕೂರು ಬಾಗಾಗೆ 61 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಮಂಗಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಕ್ಕೂರು ಬಾಬಾ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಒಂದು ವಾರದ ಹಿಂದೆ ಇವರ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ನಂತರ ಇವರಿಗೆ ಜ್ವರ ಬಂದಿದ್ದು ಅದಕ್ಕಾಗಿ ಮಂಗಳಾ ಆಸ್ಪತ್ರೆಗೆ ತೆರಳಿದ್ದಾಗ ಅಲ್ಲಿ ಕೊವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಬಳಿಕ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು

ಎಕ್ಕೂರು ಬಾಬಾರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಸ್ನೇಹಿತರು ಮತ್ತು ಹಿತೈಷಿಗಳು ಮಂಗಳಾ ಆಸ್ಪತ್ರೆಯ ಮುಂದೆ ಜಮಾಯಿಸಿದ್ದಾರೆ.

ಮಾಜಿ ರೌಡಿಯಾಗಿದ್ದ ಇವರು ಅಪರಾಧ ಚಟುವಟಿಕೆಗಳಿಗೆ ವಿದಾಯ ಹೇಳಿ ನಂತರ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com