ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!

ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ.
ಎಸ್ ಆರ್ ಶ್ರೀನಿವಾಸ್
ಎಸ್ ಆರ್ ಶ್ರೀನಿವಾಸ್

ತುಮಕೂರು: ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ. 

ಶಾಸಕ ಶ್ರೀನಿವಾಸ್ ಪತ್ನಿ, ಪುತ್ರ ಮತ್ತು ಪುತ್ರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ವೇಳೆ ಶ್ರೀನಿವಾಸ್ ಅವರ ಕೊರೋನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಈ ಬಗ್ಗೆ ಸ್ವತಃ ಶಾಸಕ ಶ್ರೀನಿವಾಸ್ ಸಾಮಾಜಿಕ  ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ.

ನಮ್ಮ ಕುಟುಂಬದ ರಾಪಿಡ್ ಟೆಸ್ಟ್ ಮತ್ತು  ಅರ್.ಟಿ.ಪಿ.ಸಿ.ಆರ್ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು ನನಗೆ ನೆಗೆಟಿವ್ ಮತ್ತು ನನ್ನ ಪತ್ನಿ, ಮಗ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳಿದ್ದು ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ದೇಶನದಂತೆ ಮನೆಯಲ್ಲೇ ಚಿಕಿತ್ಸೆ ‌ಪಡೆಯುತ್ತಿದ್ದಾರೆ ಎಂದು ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com