ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಎಚ್ಚೆತ್ತುಕೊಂಡಿರುವ ಮಾಗಡಿ ಪೊಲೀಸರು ರೌಡಿಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ ನಡೆಸಿದ್ದಾರೆ.
ಮಾಗಡಿ ಹಾಗೂ ಕುದೂರು ಮತ್ತು ತಾವರೆಕೆರೆ ರೌಡಿಗಳನ್ನು ಮಾಗಡಿ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ
ನಡೆಸುತ್ತಿದ್ದಾರೆ. ರೌಡಿಗಳ ಮನೆ ಮೇಲೆ ದಾಳಿ ನಡೆಸಿ, ಮನೆಯಲ್ಲಿದ್ದ ಆಯುಧಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಬಿ.ಎಸ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಾಗಡಿ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ ನಡೆಸಿದರು.
ಬೆಂಗಳೂರಿಗೆ ಅಂಟಿಕೊಂಡಿರುವ ತಾವರೆಕೆರೆ ಹಾಗೂ ಕುದೂರಿನಲ್ಲಿ ಯಾವುದೇ ರೀತಿಯ ಗಲಭೆ ನಡೆಯದಂತೆ ರೌಡಿಗಳಿಗೆ ಪೊಲೀಸರು ತಾಕೀತು ಮಾಡಿದರು.
Advertisement