ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ

ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ  ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ  ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​  ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸೈಬರ್ ಕ್ರೈಂ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಸಾಮಾಜ ಸ್ವಾಸ್ಥ್ಯ ಕಾಪಾಡಲು ನಾವು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಆದ್ದರಿಂದ ನಾನು ಈ ಕುರಿತು ತಾಂತ್ರಿಕ ತಜ್ಞರ​​ ಜೊತೆಯೂ ಚರ್ಚೆಯೂ ಮಾಡಿ ತೀರ್ಮಾನ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರ ರಕ್ಷಣೆ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹಸಚಿವರು,  ನಾವು  ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಸಂಪೂರ್ಣ ರಕ್ಷಣೆ ನೀಡಲಾಗುವುದು. ಈಗಾಗಲೇ ಈ ಕುರಿತು ತಾವು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದು, ಅವರ ಕುಟಂಬಕ್ಕೂ ಪೊಲೀಸ್ ಭದ್ರತೆ ಒದಗಿಸುತ್ತೇವೆ  ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com