ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನ್ನು ಸೋಮವಾರ ತೆರೆದಿದ್ದು, ಪ್ರಸ್ತುತ 41 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ.
ಸದ್ಯ ತುಂಗಭದ್ರಾ ಜಲಾಶಯದಲ್ಲಿ 1632.20 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಅರ್ಧ ಅಡಿ ಅಷ್ಟೇ ಬಾಕಿಯಿದೆ. 33, 737 ಕ್ಯೂಸೆಕ್ ನಷ್ಟು ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.ಕ್ರಸ್ಟ್ ಗೇಟ್ ಗಳ ಮೂಲಕ ಹಾಲ್ನೊರೆಯಂತೆ ಹರಿದುಬರುತ್ತಿರುವ ನೀರು ಮನಮೋಹಕವಾಗಿದೆ.
Advertisement