ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.
ನೀರು ಪಾಲು
ನೀರು ಪಾಲು

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಜಿಲ್ಲೆಯ ಕುರವಕುಲ್ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ 13 ಜನರು ದಾಟುತ್ತಿದ್ದರು. ಈ ವೇಳೆ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿದ್ದು ಉಳಿದ 8 ಜನ ಸುರಕ್ಷಿತವಾಗಿ ದಡ ಸೇರಿದ್ದಾರೆ.

ಮೂಲಗಳ ಪ್ರಕಾರ ತೆಪ್ದದಲ್ಲಿ ಪ್ರಯಾಣಿಸುತ್ತಿದ್ದವರು ಶ್ರಾವಣ ಸೋಮವಾರ ಹಿನ್ನೆಲೆ ನಾರದಗಡ್ಡೆಗೆ ತೆರಳಿ ದರ್ಶನ ಪಡೆದಿದ್ದರು. ನಂತರ ತೆಲಂಗಾಣದ ಮಕ್ತಲಗೆ ತೆರಳಿ ವಾಪಸ್​ ಅಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 8 ವರ್ಷದ ಬಾಲಕಿ ಹಾಗೂ ಮೂವರು ಮಹಿಳೆಯರು ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮಕ್ತಲ್ ಠಾಣೆ ಪೊಲೀಸರಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಅವರಿಗೆ ಯಾಪಲದಿನ್ನಿ ಪೊಲೀಸರು ಸಾಥ್​ ನೀಡುತ್ತಿದ್ದಾರೆ ಎಂದು ರಾಯಚೂರು ಎಸ್​ಪಿ ಹರಿಬಾಬು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com