ಕಬ್ಬು ಅರೆವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

ವೆಲ್ಡ್ ಮಾಡಲು ಯತ್ನಿಸುತ್ತಿದ್ದಾಗ ಕಬ್ಬಿನ ಪುಡಿಮಾಡುವ ಯಂತ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಕಾರ್ಮಿಕನನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಮೃತ್ ಕುಮಾರ್‌ (33) ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ ಈತ, ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಕಬ್ಬು ನುರಿಸುವ ಯಂತ್ರದ ಚಾವಣಿಗೆ ಅವರು ವೆಲ್ಡಿಂಗ್ ಮಾಡುತ್ತಿದ್ದರು. ಡಿವೈಎಸ್‌ಪಿ ಪ್ರಭಾಕರರಾವ್ ಶಿಂಧೆ, ಸಿಪಿಐ ಲಕ್ಷ್ಮೀಕಾಂತ್ ಕೆ.ತಳವಾರ್, ಬಿಳಿಗೆರೆ ಠಾಣೆಯ ಎಸ್‍.ಐ ಆಕಾಶ್ ಕಾರ್ಖಾನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಾದರೂ ದೂರು ದಾಖಲಾಗಿಲ್ಲ ಎಂಬುದು ಗೊತ್ತಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com