ಕೆಐಎಗೆ ರೈಲ್ವೇ ನಿಲ್ದಾಣ ನೀಡಿದ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನ; ಡಾ.ಕೆ.ಸುಧಾಕರ್

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೇಂದ್ರದ ರೈಲ್ವೇ ಸಚಿವ ಪಿಯುಷ್ ಗೋಯಲ್ ಅವರು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲ್ವೇ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ದಶಕಗಳಷ್ಟು ಹಳೆಯ ಬೇಡಿಕೆಯನ್ನು ಈಡೇರಿಸಿದ್ದಾರೆ. ರೈಲ್ವೇ ಉಡುಗೊರೆ ನೀಡಿದ ಅವರಿಗೆ ಹೃತ್ಫೂರ್ವಕ ನಮನಗಳು ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ವಿಮಾನ ನಿಲ್ದಾಣಕ್ಕೆ ರೈಲ್ವೆ ನಿಲ್ದಾಣ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ. 

ಭಾನುವಾರ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುಸಜ್ಜಿತ ರೈಲು ನಿಲ್ದಾಣ ನಿರ್ಮಾಣ ಮಾಡುವುದಾಗಿ ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com