ಹೊಸಪೇಟೆ: ವಿದ್ಯುತ್ ಕಂಬದಲ್ಲಿ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಜೆಸ್ಕಾಂ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟಗಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಹನುಮಂತ (35) ಎಂದು ಗುರುತಿಸಲಾಗಿದೆ,
ಗ್ರಾಮದಲ್ಲಿ ವಿದ್ಯುತ್ ಕಡಿತವಾದರಿಂದ ಕಂಬ ಹತ್ತಿ ಸಮಸ್ಯೆ ಸರಿಪಡಿಸುವ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ವಿದ್ಯುತ್ ತಗುಲಿ ಮೇಲಿನಿಂದ ಬಿದ್ದ ಪರಿಣಾಮ ಸ್ಥಳದಲ್ಲೇ ಲೈನ್ ಮನ್ ಸಾವನ್ನಪ್ಪಿದ್ದಾನೆ,
ಕಂಪ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.
Advertisement