ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ

ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್​ದೀಪ್​ ಕುಮಾರ್ ಜೈನ್​ರನ್ನು ACB ಎಸ್​ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್​ವರನ್ನು CCBಯ ಡಿಸಿಪಿ ಗ್ರೇಡ್​ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ  ಅನಿಲ್ ಲಟ್ಕರ್​ರನ್ನು CCB ಎಐಜಿ ಆಗಿ ನೇಮಿಸಲಾಗಿದ್ದು, ಬಳ್ಳಾರಿ ಎಸ್ಪಿ ಆಗಿದ್ದ ಸಿ.ಕೆ.ಬಾಬಾ ಬೆಂಗಳೂರಿನ ಸಿಐಡಿ, ಎಸ್​ಪಿ ಆಗಿ ನೇಮಿಸಲಾಗಿದೆ. ಇನ್ನು ಲೋಕಾಯುಕ್ತ ಎಸ್​ಪಿ ಆಗಿದ್ದ ಸೈದುಲು ಅದಾವತ್​ರನ್ನು ಬಳ್ಳಾರಿ ಜಿಲ್ಲಾ ಎಸ್​ಪಿಯಾಗಿ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com