ಬೆಂಗಳೂರು: ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಆ.25ರಂದು ಪ್ರಸಾದ್ಗೆ ಸೋಂಕು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಗುರುವಾರ ರಾತ್ರಿ ನಡೆಸಿದ ಮತ್ತೊಂದು ಪರೀಕ್ಷೆಯಲ್ಲಿ ಅವರ ಪರೀಕ್ಷಾ ಫಲಿತಾಂಶ ನೆಗೆಟೀವ್ ಬಂದಿತ್ತು. ಮಣಿಪಾಲ ಆಸ್ಪತ್ರೆಯ ವೈದ್ಯರಿಗೆ ಅವರಿಗೆ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
ಪ್ರಮುಖ ದಲಿತ ನಾಯಕ ಪ್ರಸಾದ್ ಅವರ ಶೀಘ್ರ ಚೇತರಿಕೆಗೆ ಹಲವು ಅನುಯಾಯಿಗಳು ಪ್ರಾರ್ಥನೆ ಸಲ್ಲಿಸಿದ್ದರು.
Advertisement