ಸಮಾಧಾನ ತಂದ ಚೇತರಿಕೆ: ರಾಜ್ಯಾದ್ಯಂತ ಇಂದು 7464 ಕೋವಿಡ್-19 ಸೋಂಕಿತರು ಗುಣಮುಖ

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಇಂದು ರಾಜ್ಯಾದ್ಯಂತ ಮತ್ತೆ 7 ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಇಂದು ರಾಜ್ಯಾದ್ಯಂತ ಮತ್ತೆ 7 ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದಾರೆ.

ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 7464 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 227018ಕ್ಕೆ ಏರಿಕೆಯಾಗಿದೆ.

ಅಂತೆಯೇ ಇಂದು 136 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಸೋಂಕಿಗೆ ತುತ್ತಾಗಿ ಬೇರೆ ಕಾರಣಗಳಿಂದ ಸಾವನ್ನಪ್ಪಿರುವವರ ಸಂಖ್ಯೆ 19. ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ ಒಟ್ಟಾರೆ 5368ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಇಂದು 8960 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3 ಲಕ್ಷದ 18 ಸಾವಿರದ 752ಕ್ಕೆ ಏರಿಕೆಯಾಗಿದೆ. ಈ ಪೈಕಿ 227018 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 86,347 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 754 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com