ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್

 ಕಲ್ಯಾಣ  ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಸಚಿವ ಪ್ರಭು ಚವ್ಹಾಣ್
ಸಚಿವ ಪ್ರಭು ಚವ್ಹಾಣ್

ಬೀದರ್: ಕಲ್ಯಾಣ  ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು, ಇಲ್ಲವೇ ಪರಿಣಾಮ  ಎದುರಿಸಲು ಸಿದ್ಧರಾಗಿ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಒಂದೆಡೆ   ಸಂಕಷ್ಟ, ಮತ್ತೊಂದೆಡೆ ನೆರೆಯಿಂದ ಆದಾಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ. ಇಂತಹ ವೇಳೆಯಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ. ಈಗ ಕಲ್ಯಾಣ ಕರ್ನಾಟಕ  ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿಸ್ಕಿನ್’ ಜಾನುವಾರುಗಳಿಗೆ ಈ ವಿಚಿತ್ರ ಕಾಯಿಲೆ  ಕಂಡುಬಂದಿದ್ದು, ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದರಿಂದ ಪಶುಪಾಲಕರು  ಆಂತಂಕಕ್ಕಿಡಾಗಿರುವುದು ತಮ್ಮ ಗಮನಕ್ಕೂ ಬಂದಿದೆ ಎಂದರು.

ಕಲ್ಯಾಣ  ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮತ್ತು  ಪಶುವೈದ್ಯಾಧಿಕಾರಿಗಳಿಗೆ ರೋಗ ಹೆಚ್ಚು ಕಂಡುಬರುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ  ರೋಗ  ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ, ಹೆಚ್ಚು ಪ್ರಕರಣಗಳಿರುವ  ಗ್ರಾಮಗಳಲ್ಲಿ ಪಶು ಆರೋಗ್ಯ ಶಿಬಿರ ನಡೆಸಿ ರೋಗವನ್ನು ಹತೋಟಿಗೆ ತರಲು ಕ್ರಮ  ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com