ಬಳ್ಳಾರಿ: ಜಿಟಿ ಜಿಟಿ ಮಳೆಗೆ ಮಣ್ಣಿನ ಗೋಡೆ ಕುಸಿದ ಪರಿಣಾಮ ದಂಪತಿ ಮೃತಪಟ್ಟಿರುವ ದಾರುಣ ಘಟನೆ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಅದೋನಿ ಸ್ಟ್ರೀಟ್ ನಲ್ಲಿ ಸಂಭವಿಸಿದೆ.
ಕೋಲಣ್ಣ (45), ಸಾವಿತ್ರಿ (40) ಮೃತ ದಂಪತಿ. ಮಣ್ಣಿನಡಿ ಸಿಲುಕಿದ್ದ 13 ವರ್ಷದ ಸಂತೋಷ್ ಎಂಬ ಬಾಲಕನನ್ನು ರಕ್ಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿರುವ ಪರಿಣಾಮ ಮಣ್ಣಿನ ಮನೆ ಕುಸಿದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ
ಸ್ಥಳಕ್ಕೆ ಕೌಲ್ ಬಜಾರ್ ಠಾಣೆಯ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement