ಬಳ್ಳಾರಿ: ಖ್ಯಾತ ಹೃದಯ ತಜ್ಞರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಬಿ.ಕೆ. ಶ್ರೀನಿವಾಸಮೂರ್ತಿ (80) ಇಂದು ನಿಧನರಾದರು.
ಬಳ್ಳಾರಿಯ ಸರಳ, ಸಜ್ಜನ ವೈದ್ಯರಾಗಿದ್ದ, ಡಾ. ಬಿ.ಕೆ. ಶ್ರೀನಿವಾಸಮೂರ್ತಿ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು ಮೂರು ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾಗಿದ್ದಾರೆ.
ಕೇಂದ್ರದ ಮಾಜಿ ಸಚಿವೆ ದಿ.ಸುಷ್ಮಾಸ್ವರಾಜ್ ಅವರು ಬಳ್ಳಾರಿಯಲ್ಲಿ ವರ ಮಹಾಲಕ್ಷ್ಮಿ ಪೂಜೆಯನ್ನು, ಡಾ. ಬಿ.ಕೆ.ಶ್ರೀನಿವಾಸಮೂರ್ತಿ ಅವರ ಮನೆಯಲ್ಲಿ ಮಾಡುತ್ತಿದ್ದರು. ಸುಮಾರು 15 ವರ್ಷಗಳ ಕಾಲ ಅವರು ಬಳ್ಳಾರಿಗೆ ಬಂದು, ವರ ಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸುತ್ತಿದ್ದರು.
ಬಿ.ಕೆ.ಶ್ರೀನಿವಾಸಮೂರ್ತಿ ನಗರದಲ್ಲಿ ಬಿ.ಕೆ.ಎಸ್. ಆಸ್ಪತ್ರೆಯ ಮೂಲಕ ಜನ ಸೇವೆ ಮಾಡುತ್ತಾ ಜನರ ಪ್ರೀತಿಗೆ ಪತ್ರವಾಗಿದ್ದರು.
ಮೃತರು ಡಾ.ಬಿ.ಕೆ.ಸುಂದರ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬಳ್ಳಾರಿ ನಗರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Advertisement