ಕೊಡಗು: ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ಘಟನೆ ನಡೆದಿದ್ದು, ಗೂಡ್ಸ್ ವಾಹನ ಹಾಗೂ ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ನಿವಾಸಿಗಳಾದ ಹರೀಶ್ ಹಾಗೂ ಸುಬ್ರಮಣಿ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಪುಡಿಪುಡಿಯಾಗಿದ್ದು, ಮೃತ ವ್ಯಕ್ತಿ ಹರೀಶ್ ಓಮ್ನಿ ಚಾಲಕನೆಂದು ತಿಳಿದುಬಂದಿದೆ.
ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement