ಶಿವಮೊಗ್ಗ: ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಬಳಿ ಸಂಭವಿಸಿದೆ.
ಮೃತರನ್ನು ರಾಜೇಶ್ (19), ತರುಣ್ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಲಗಳ ಪ್ರಕಾರ ಬೆಂಗಳೂರು ಮೂಲದ 8 ಮಂದಿ ಯುವಕರು ಗೋವಾಕ್ಕೆ ಪ್ರವಾಸ ತೆರಳಿದ್ದರು. ಗೋವಾದಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement