ಚಾಮರಾಜನಗರ: ಬಿಎಸ್ಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ರವರ ಇಬ್ಬರು ಬೆಂಬಲಿಗರನ್ನು ಪೋಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಗರಸಭೆ ಸದಸ್ಯ ನಾಸೀರ್ ಷರೀಫ್ ಮತ್ತು ಜಕಾವುಲ್ಲಾ ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಬಿಎಸ್ಪಿ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ ಶಾಸಕ ಮಹೇಶ್ ವಿರುದ್ಧ ಅವಾಚ್ಯ ಶಬ್ದಗಳ ಬಳಜೆ ಮಾಡಿ ಹರಿಹಾಯ್ದಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರ ಬೆಂಬಲಿಗರಾದ ನಾಸೀರ್ ಹಾಗೂ ಜಕಾವುಲ್ಲಾ ಬಿಎಸ್ಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಇದರ ಸಂಬಂಧ ಈ ಇಬ್ಬರ ವಿರುದ್ಧ ಹಲ್ಲೆ ಹಾಗೂ ಜಾತಿ ನಿಂದನೆ ಕೇಸ್ ದಾಖಲಾಗಿತ್ತು,
ದೂರಿನ ಹಿನ್ನೆಲೆ ಇಂದು ಕೊಳ್ಳೇಗಾಲ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
Advertisement