ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶುಕ್ರವಾರ ಗೋವುಗಳಿಗೆ ಪೂಜೆ ನೆರವೇರಿಸಿದರು.
ಮೊನ್ನೆಯಷ್ಟೇ ವಿಧಾನಸಭೆಯಲ್ಲಿ ಕರ್ನಾಟಕ ಗೋ ಸಂರಕ್ಷಣೆ ಮತ್ತು ಹತ್ಯೆ ಮಸೂದೆ 2020ನ್ನು ಮಂಡಿಸಿ ಅನುಮೋದನೆ ಪಡೆದಿದ್ದ ಸರ್ಕಾರ ನಿನ್ನೆಯ ಕಲಾಪದಲ್ಲಿ ವಿಧಾನ ಪರಿಷತ್ ನಲ್ಲಿ ಮಸೂದೆಯನ್ನು ಮಂಡಿಸಿರಲಿಲ್ಲ.
ನಿನ್ನೆಯ ಕಲಾಪಕ್ಕೆ ಪ್ರತಿಪಕ್ಷದ ಸದಸ್ಯರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಈ ವಾರ ವಿಧೇಯಕವನ್ನು ಹೊರಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
Advertisement