ಕಣ್ಣು ಹೋದರೂ ಕನಸು ಬಿಡದ‌ ಛಲದಂಕ: ಬ್ರೈಲ್​​ ಲಿಪಿ ಬಳಸದೆ ಪಿಎಚ್​ಡಿ ಪಡೆದ ವಿಶೇಷಚೇತನ

ಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್​​ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್​ಡಿ ಪದವಿ ಪಡೆದಿದ್ದಾರೆ.
ಪಿಎಚ್ ಡಿ ಪಡೆದ ಮನುಕುಮಾರ್
ಪಿಎಚ್ ಡಿ ಪಡೆದ ಮನುಕುಮಾರ್

ಚಾಮರಾಜನಗರ: ಕಣ್ಣಿದ್ದವರೇ ಓದು ತಲೆಗೆ ಹತ್ತದೇ ಇಲ್ಲವೇ ನಿರಾಸಕ್ತಿಯಿಂದ ಅರ್ಧಕ್ಕೆ ವಿದ್ಯೆ ನಿಲ್ಲಿಸುವವರ ನಡುವೆ ಈ‌ ಅಂಧ ವ್ಯಕ್ತಿ ಮೈಸೂರು ವಿವಿಯಲ್ಲಿ ಮಹಾಪ್ರಬಂಧ ಮಂಡಿಸಿ ಪಿಎಚ್ಡಿಗೆ ಭಾಜನರಾಗಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್​​ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್​ಡಿ ಪದವಿ ಪಡೆದಿದ್ದಾರೆ.

ಬ್ರೈಲ್​​ ಲಿಪಿ ಬಳಸದೆ ಪಿಎಚ್​ಡಿ ಪಡೆದ ವಿಶೇಷಚೇತನ
ಮೈವಿವಿಯ ಸಂಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಆರ್‌.ಎನ್‌.ದಿನೇಶ್ ಮಾರ್ಗದರ್ಶನದಲ್ಲಿ "ಚಾಮರಾಜನಗರ ಜಿಲ್ಲೆಯ ದಿವ್ಯಾಂಗ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಪಾತ್ರ-ಒಂದು ಅಧ್ಯಯನ" ಎಂಬ ವಿಷಯದಲ್ಲಿ ಮಹಾಪ್ರಬಂಧ  ಮಂಡಿಸಿ ಪಿಎಚ್ ಅಡಿ ಪದವಿ ಪಡೆದಿದ್ದಾರೆ. ಮೂರುವರೆ ವರ್ಷ 105 ಶಾಲೆಯ 354 ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಿ ಸಂಶೋಧನಾ ಪ್ರಬಂಧ ಬರೆದಿದ್ದಾರೆ.

ಬ್ರೈಲ್ ಲಿಪಿ ಬಳಸಲ್ಲ, ವಿಶೇಷ ಶಾಲೆಗೆ ಹೋಗಿಲ್ಲ:
ಮನುಕುಮಾರ್ ಅವರ ಏಕಾಗ್ರತೆಗೆ ಸಾಕ್ಷಿ ಎಂಬಂತೆ ಇಲ್ಲಿಯವರೆಗೂ ಅಂಧರು ಬಳಸುವ ಯಾವುದೇ ಸಾಧನವನ್ನು ಬಳಸದೇ ಸಾಮಾನ್ಯರಂತೆ ಓಡಾಟ ನಡೆಸುತ್ತಾರೆ. ಜೊತೆಗೆ, ಟೇಪ್ ರೆಕಾರ್ಡರ್, ಮೊಬೈಲ್ ಸಹಾಯದ ಮೂಲಕ ಧ್ವನಿ ಮುದ್ರಿಸಿಕೊಂಡು, ಆಡಿಯೋ ಪುಸ್ತಕಗಳನ್ನು  ಕೇಳಿ ಸಾಮಾನ್ಯ ಶಾಲೆಯಲ್ಲೇ ಕಲಿತು ಈ ಸಾಧನೆ ಮಾಡಿದ್ದಾರೆ

ವರದಿ: ಗುಳಿಪುರ ನಂದೀಶ. ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com