ಚಾಮರಾಜನಗರ: ಕಣ್ಣಿದ್ದವರೇ ಓದು ತಲೆಗೆ ಹತ್ತದೇ ಇಲ್ಲವೇ ನಿರಾಸಕ್ತಿಯಿಂದ ಅರ್ಧಕ್ಕೆ ವಿದ್ಯೆ ನಿಲ್ಲಿಸುವವರ ನಡುವೆ ಈ ಅಂಧ ವ್ಯಕ್ತಿ ಮೈಸೂರು ವಿವಿಯಲ್ಲಿ ಮಹಾಪ್ರಬಂಧ ಮಂಡಿಸಿ ಪಿಎಚ್ಡಿಗೆ ಭಾಜನರಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ.
ಬ್ರೈಲ್ ಲಿಪಿ ಬಳಸದೆ ಪಿಎಚ್ಡಿ ಪಡೆದ ವಿಶೇಷಚೇತನ
ಮೈವಿವಿಯ ಸಂಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಆರ್.ಎನ್.ದಿನೇಶ್ ಮಾರ್ಗದರ್ಶನದಲ್ಲಿ "ಚಾಮರಾಜನಗರ ಜಿಲ್ಲೆಯ ದಿವ್ಯಾಂಗ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಪಾತ್ರ-ಒಂದು ಅಧ್ಯಯನ" ಎಂಬ ವಿಷಯದಲ್ಲಿ ಮಹಾಪ್ರಬಂಧ ಮಂಡಿಸಿ ಪಿಎಚ್ ಅಡಿ ಪದವಿ ಪಡೆದಿದ್ದಾರೆ. ಮೂರುವರೆ ವರ್ಷ 105 ಶಾಲೆಯ 354 ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಿ ಸಂಶೋಧನಾ ಪ್ರಬಂಧ ಬರೆದಿದ್ದಾರೆ.
ಬ್ರೈಲ್ ಲಿಪಿ ಬಳಸಲ್ಲ, ವಿಶೇಷ ಶಾಲೆಗೆ ಹೋಗಿಲ್ಲ:
ಮನುಕುಮಾರ್ ಅವರ ಏಕಾಗ್ರತೆಗೆ ಸಾಕ್ಷಿ ಎಂಬಂತೆ ಇಲ್ಲಿಯವರೆಗೂ ಅಂಧರು ಬಳಸುವ ಯಾವುದೇ ಸಾಧನವನ್ನು ಬಳಸದೇ ಸಾಮಾನ್ಯರಂತೆ ಓಡಾಟ ನಡೆಸುತ್ತಾರೆ. ಜೊತೆಗೆ, ಟೇಪ್ ರೆಕಾರ್ಡರ್, ಮೊಬೈಲ್ ಸಹಾಯದ ಮೂಲಕ ಧ್ವನಿ ಮುದ್ರಿಸಿಕೊಂಡು, ಆಡಿಯೋ ಪುಸ್ತಕಗಳನ್ನು ಕೇಳಿ ಸಾಮಾನ್ಯ ಶಾಲೆಯಲ್ಲೇ ಕಲಿತು ಈ ಸಾಧನೆ ಮಾಡಿದ್ದಾರೆ
ವರದಿ: ಗುಳಿಪುರ ನಂದೀಶ. ಎಂ
Advertisement