ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲಿಲ್ಲ ಅವರ ಕ್ಯಾತೆ, ಕಾಂಗ್ರೆಸ್ ವ್ಯಂಗ್ಯ

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಗೋವಿನೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಗೋವಿನೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ!. ಇದಕ್ಕೆ ಕರ್ನಾಟಕ ಬಿಜೆಪಿಯ ಅಭಿಪ್ರಾಯ ಮತ್ತು ಉತ್ತರ ಏನು ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗೋವಾದಲ್ಲಿ ಬೀಫ್ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೊರತೆಯನ್ನು ನೀಗಿಸಲು ಕರ್ನಾಟಕದಿಂದ ಬೀಫ್ ಪೂರೈಸಲಾಗುವುದು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ಟ್ವೀಟ್ ಪ್ರಹಾರ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com