ಮಡಿಕೇರಿ: ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಕೊಡವರು ಮಡಿಕೇರಿಯಲ್ಲಿಂದು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಮಡಿಕೇರಿ ಕೊಡವ ಸಮಾಜ, ಪೊನ್ನಂಪೇಟೆ ಕೊಡವ ಸಮಾಜ, ಮಡಿಕೇರಿ ಹಿತ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆ ಸದಸ್ಯರು ಜಮಾವಣೆಗೊಂಡು ಘೋಷಣೆ ಕೂಗಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದರು. ಕಾವೇರಿ ಮಾತೆ, ಇಗ್ಗುತ್ತಪ್ಪ, ಕೊಡವ ಕುಲಕ್ಕೆ ಪ್ರತಿಭಟನಕಾರರು ಜಯಕಾರ ಹಾಕಿದರು.
ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ. ಸಿದ್ದರಾಮಯ್ಯ ಬಹಿರಂಗವಾಗಿ ಕೊಡವರ ಕ್ಷಮೆ ಕೋರಬೇಕು. ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಕಾರರ ಒಕ್ಕೊರಲಿನಿಂದ ಆಗ್ರಹಿಸಿದರು.
Advertisement