ಬೀದರ್: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಭೀಕರ ಕೊಲೆ

ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಬೆಂಕಿಯಿಂದ ಸುಟ್ಟಿರುವ ಭೀಕರ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ನಡೆದಿದೆ.
ಕೊಲೆಯಾದ ಯುವಕ
ಕೊಲೆಯಾದ ಯುವಕ

ಬೀದರ್: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಬೆಂಕಿಯಿಂದ ಸುಟ್ಟಿರುವ ಭೀಕರ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ನಡೆದಿದೆ.

ಔರಾದ್ ನ ಕೋಟಗ್ಯಾಳ ಗ್ರಾಮದ ಶಿವಕುಮಾರ್ ಹಾವಪ್ಪಗೋಡೆ (17) ಮೃತ ದುರ್ದೈವಿ.

ಯುವಕನನ್ನು ಚಾಕುವಿನಿಂದ ಚುಚ್ಚಿ ಕೊಲ್ಲಲಾಗಿದ್ದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. 

ಯುವಕ ಶಿವಕುಮಾರ್ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದೇವಣಿ ಪಟ್ಟಣದಲ್ಲಿದ್ದ ಸೋದರಿ ಮನೆಯಿಂದ ಹೊಂತಿರುಗಿತ್ತಿದ್ದ. ಮಗ ತಡರಾತ್ರಿಯಾದರೂ ಮನೆಗೆ ಬಾರದ್ದಕ್ಕೆ ಪೋಷಕರಿಗೆ ಅನುಮಾನ ಬಂದಿದ್ದು ಹುಡುಕಾಟ ನಡೆಸಿದಾಗ ಯುವಕನ ಬೈಕ್ ಪತ್ತೆಯಾಗಿದೆ. ಆ ನಂತರ ಪೋಲೀಸ್ ಸಹಕಾರದೊಡನೆ ಹುಡುಕಿದಾಗ ಮೃತದೇಹ ಸಿಕ್ಕಿದೆ.  

ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್, ಡಿವೈಎಸ್​ಪಿ ಡಾ. ದೇವರಾಜ್ ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com