ಬೆಂಗಳೂರು: ರಾಜ್ಯದಲ್ಲೂ ಬ್ರಿಟನ್ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವುದರಿಂದ ರಾತ್ರಿ ಕರ್ಪ್ಯೂ ಜಾರಿಯ ಜೊತೆಗೆ ನಿರ್ಬಂಧಗಳನ್ನು ಬಿಗಿಯಾಗಿ ಜಾರಿಗೊಳಿಸಬೇಕಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ನಿಜವಾದ ರಿಯಲ್ ನೈಟ್ ಕರ್ಫ್ಯೂ ಜಾರಿ ಅಗತ್ಯ ಇದೆ’ ಎಂದಿದ್ದಾರೆ. ‘ಈ ಸಂಬಂಧ ನಾನು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲೂ ಬಿಗಿ ಕ್ರಮಗಳನ್ನು ಜಾರಿಗೆ ತರುವ ಬಗ್ಗೆಯೂ ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ.
ಬ್ರಿಟನ್ ವೈರಸ್ ಸೋಂಕು ಹೆಚ್ಚುತ್ತಿದೆ. ನಿರ್ದಿಷ್ಟ ಜಿಲ್ಲೆಗಳಲ್ಲಿ ಬ್ರಿಟನ್ ವೈರಸ್ ಸೋಂಕು ಹೆಚ್ಚಿದರೆ ಆಗ ಕ್ರಮಕೈಗೊಳ್ಳಬೇಕಾಗುತ್ತದೆ. ಸದ್ಯ ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.
Advertisement