ವಿದ್ಯುತ್ ತಂತಿ ತಗುಲಿ ಲಾರಿ ಸುಟ್ಟು ಭಸ್ಮ.!

ವಿದ್ಯುತ್ ತಂತಿ ತಗುಲಿ  ಕಬ್ಬಿನ ಸಿಪ್ಪೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಳ್ಳೆಕೆರೆ ಸಮೀಪ ನಡೆದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ: ವಿದ್ಯುತ್ ತಂತಿ ತಗುಲಿ  ಕಬ್ಬಿನ ಸಿಪ್ಪೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಳ್ಳೆಕೆರೆ ಸಮೀಪ ನಡೆದಿದೆ

ಇಂದು ಮಧ್ಯಾಹ್ನ ಕಬ್ಬಿನ ಸಿಪ್ಪೆಯನ್ನು ಲಾರಿಯಲ್ಲಿ ತುಂಬಿಕೊಂಡು ಮೈಸೂರು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು,ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಲಾರಿಯಿಂದ ಜಿಗಿದು ಅಪಾಯದಿಂದ ಪಾರಾಗಿದ್ದಾರೆ. 

ಗ್ರಾಮಸ್ಥರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರೂ ಲಾರಿ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ ಈ ಸಂಬಂಧ ಕೆ.ಆರ್.ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರಕ್ಕೆ ಆಗ್ರಹ; ಇನ್ನು ಇಂತಹ ಅವಘಡಗಳು ತಾಲೂಕಿನಲ್ಲಿ ನಡೆಯುತ್ತಿದ್ದು,ಅವುಗಳನ್ನು ತಡೆಯಲು ಸೂಕ್ತ ಕ್ರಮಕೈಗೊಳ್ಳಬೇಕು, ವಿದ್ಯುತ್ ಅವಘಡದ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಒತ್ತಾಯ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com