ಮೈಸೂರು: ಅಪಘಾತಕ್ಕೀಡಾಗಿ ರಸ್ತೆಯಲ್ಲಿಯೇ ನರಳುತ್ತಿದ್ದ ಯುವಕರನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಬಿಜೆಪಿ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ
ಬನ್ನೂರು-ಮೈಸೂರು ರಸ್ತೆಯಲ್ಲಿ ಓಮಿನಿ- ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು. ಆದರೆ,ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಂದಿರಲಿಲ್ಲ
ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿ.ವೈ.ವಿಜಯೇಂದ್ರ ಅವರು ಗಾಯಾಳುಗಳನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ
Advertisement
Advertisement