ಪ್ರತ್ಯೇಕ ಅಪಘಾತ, ಐವರು ದುರ್ಮರಣ

ರಾಜ್ಯದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ವಿಜಯಪುರ ಹಾಗೂ ತುಮಕೂರುಗಳಲ್ಲಿ ಈ ಅವಘಡ ಸಮ್ಬವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಜಯಪುರ/ತುಮಕೂರು: ರಾಜ್ಯದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ವಿಜಯಪುರ ಹಾಗೂ ತುಮಕೂರುಗಳಲ್ಲಿ ಈ ಅವಘಡ ಸಮ್ಬವಿಸಿದೆ.

ಲಾರಿವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಸಂಭವಿಸಿದೆ. ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಹೊಸಪೇಟೆ ಮೂಲದ ರಾಜೇಶ್ (32), ಯೇಸುವಾಸ್ (32), ಭುಜಂಗರಾವ್ (38) ಮೃತ ದುರ್ದೈವಿಗಳು. ಇವರು ಹೊಸಪೇಟೆಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದರು.ಟನೆ ಬಳಿಕ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಇಬ್ಬರೂ ನಾಪತ್ತೆಯಾಗಿದ್ದಾರೆ. ಎನ್‍ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು

ಮರವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕುರುಬ ರಾಮನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಕಾರಿನಲ್ಲಿದ್ದ ಹನುಮಂತರಾಯಪ್ಪ (38), ಪವನ್ (30) ಮೃತ ದುರ್ದೈವಿಗಳು. ಮೃತರು ಮೂಲತಃ ಆಂಧ್ರಪ್ರದೇಶದ ಮಡಕಶಿರಾದವರು ಎನ್ನಲಾಗಿದೆ. ಅಪಘಾತದಲ್ಲಿ ಓರ್ವನಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com