ಬೆಂಗಳೂರು:ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಕನ್ನಡ ಪರ ಹೋರಾಟಗಾರರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಲು ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕಾಗಿ ಅನೇಕ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು.
ಈ ಮಧ್ಯೆ ಆಪ್ ಆಧಾರಿತ ಕಾರ್ಯಾಚರಣೆ ನಡೆಸುವ ಟ್ಯಾಕ್ಸಿ ಸೇವೆಯನ್ನು ಬೆಳಗ್ಗೆಯಿಂದ ಸಂಜೆಯವರೆಗೂ ಸ್ಥಗಿತಗೊಳಿಸಲಾಗಿತ್ತು. ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರನ್ನು ಕೂಡಾ ಗೃಹ ಬಂಧನದಲ್ಲಿ ಇಡಲಾಗಿತ್ತು.
Advertisement