ಬಳ್ಳಾರಿ ಬಳಿ ಕಾರು ಅಪಘಾತಕ್ಕೆ ಇಬ್ಬರು ಬಲಿ: ಕಾರಿನಲ್ಲಿದ್ದದ್ದು ಆರ್. ಅಶೋಕ್ ಪುತ್ರ?

ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.
ಅಪಘಾತವಾದ ಕಾರು
ಅಪಘಾತವಾದ ಕಾರು

ಬೆಂಗಳೂರು: ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.

KA-05 MW-0357 ಕಾರಿನ ನಂಬರ್ ಮರ್ಸಿಡಿಸ್ ಬೆಂಜ್ ಕಾರ್ ಇದಾಗಿದೆ. ಹಂಪಿ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಮೋಜು ಮಸ್ತಿ ಮಾಡಿಕೊಂಡು ಸೋಮವಾರ ಬೆಂಗಳೂರಿನ ಕಡೆಗೆ ಐದು ಜನರಿದ್ದ ಬೆಂಜ್ ಕಾರು ಹೊಸಪೇಟೆಯ ಹೊರವಲಯದಲ್ಲಿ ಇರುವ ಮರಿಯಮ್ಮನಹಳ್ಳಿ ಮಾರ್ಗವಾಗಿ ಪಯಣಿಸುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ತಲೆಗೆ ಪೆಟ್ಟು ಬಿದ್ದಿದ್ದ ಅಶೋಕ್ ಅವರ ಪುತ್ರನನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ಎಫ್ ಐ ಆರ್ ನಲ್ಲಿ ಕಾರು ಚಾಲಕನ ಹೆಸರನ್ನು ರಾಹುಲ್ ಎಂದು ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. 

ಅಪಘಾತವಾದ ಕಾರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಹೆಸರಿನಲ್ಲಿದೆ. ಇದು ಆರ್ ಅಶೋಕ್ ಅವರಿಗೆ ಸೇರಿದ್ದ ಕಾರು ಎನ್ನಲಾಗಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com