ಕಂಬಳದಲ್ಲಿ ಮತ್ತೊಬ್ಬ ವೇಗದ ಓಟಗಾರ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ನಿಶಾಂತ್ ಶೆಟ್ಟಿ!

ಇತ್ತಿಚೆಗೆ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿದ್ದ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. 
ಕಂಬಳದಲ್ಲಿ ಮತ್ತೊಬ್ಬ ವೇಗದ ಓಟಗಾರ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ನಿಶಾಂತ್ ಶೆಟ್ಟಿ!
ಕಂಬಳದಲ್ಲಿ ಮತ್ತೊಬ್ಬ ವೇಗದ ಓಟಗಾರ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ನಿಶಾಂತ್ ಶೆಟ್ಟಿ!

ಮಂಗಳೂರು: ಇತ್ತಿಚೆಗೆ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿದ್ದ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ವೇಣೂರಿನ ಪೆರ್ಮುಡ ಕಂಬಳದಲ್ಲಿ ನಿಶಾಂತ್​ ಶೆಟ್ಟಿ ಎಂಬುವವರು ನೂತನ ದಾಖಲೆ ಬರೆದಿದ್ದಾರೆ.

ನಿಶಾಂತ್ ಅವರು 143 ಮೀಟರ್‌ ದೂರವನ್ನು ಕೇವಲ 13.61 ಸೆಕೆಂಡ್​​ನಲ್ಲಿ ಓಡುವ ಮೂಲಕ ಸಾಧನೆ ಮಾಡಿದ್ದು, ಈ ಹಿಂದೆ ಇದ್ದ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮುರಿದಿದ್ದಾರೆ. ನಿಶಾಂತ್ ಶೆಟ್ಟಿ ಅವರು ಮೂಲತಃ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬಜಗೋಳಿಯವರು.

 ಶ್ರೀನಿವಾಸ್ ಗೌಡ 13.62 ಸೆಕೆಂಡ್​ನಲ್ಲಿ 143 ಮೀಟರ್​ ಕ್ರಮಿಸಿದ್ದರೆ, ನಿಶಾಂತ್ ಶೆಟ್ಟಿ ಕೇವಲ 13.61 ಸೆಕೆಂಡ್​ಗಳಲ್ಲಿ ಓಡಿ ಸಾಧನೆ ಮಾಡಿದ್ದಾರೆ.‌ಇನ್ನು ನಿಶಾಂತ್ ಶೆಟ್ಟಿ ಹಾಗೂ ಶ್ರೀನಿವಾಸ್ ಗೌಡ ಇಬ್ಬರೂ ಆತ್ಮೀಯ ಸ್ನೇಹಿತರೆಂಬುದು ವಿಶೇಷ.

ಇತ್ತೀಚೆಗೆ ಜಾನಪದ ಕ್ರೀಡೆ ಕಂಬಳದಲ್ಲಿ ಶ್ರೀನಿವಾಸ್ ಗೌಡರ ವೇಗವನ್ನು ಕಂಡು ಕೇಂದ್ರ, ರಾಜ್ಯ ಸರ್ಕಾರ ಅವರನ್ನು ಗುರುತಿಸಿತ್ತು

ಕ್ರೀಡಾ ಸಚಿವ ಕಿರಣ್​ ರಿಜಿಜು ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿಗೆ ಟ್ರಯಲ್ಸ್‌ಗೆ ಬರುವಂತೆ ಶ್ರೀನಿವಾಸ್ ಗೌಡ ಅವರಿಗೆ ಆಹ್ವಾನ ನೀಡಿದ್ದರು. ಆದರೆ, ಈ ಆಹ್ವಾನವನ್ನು ಶ್ರೀನಿವಾಸ್ ಗೌಡರು ವಿನಮ್ರವಾಗಿ ತಿರಸ್ಕರಿಸಿದ್ದರು.

ಸೋಮವಾರ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶ್ರೀನಿವಾಸ್ ಗೌಡರನ್ನು ಸನ್ಮಾನಿಸಿದ್ದು, ಕಾರ್ಮಿಕ ಇಲಾಖೆಯಿಂದ 3 ಲಕ್ಷ‌ರೂ ಚೆಕ್ ವಿತರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com